ಪ್ರಧಾನ ಮಂತ್ರಿಯವರ ಕಛೇರಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಹೇಳಿಕೆಗಳು ರಾಷ್ಟ್ರೀಯ ಪ್ರಗತಿಯೆಡೆಗಿನ ಅವರ ಉತ್ಸಾಹವನ್ನು ತೋರಿಸುತ್ತದೆ: ಪ್ರಧಾನಮಂತ್ರಿ

Posted On: 24 JUL 2022 9:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಧಿಕಾರದಿಂದ ಕೆಳಗಿಳಿಯುವ ಮುನ್ನಾದಿನ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಸ್ಪೂರ್ತಿದಾಯಕ ಭಾಷಣವು "ಅವರು ನಮ್ಮ ರಾಷ್ಟ್ರಪತಿಯಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ," ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:

" ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಸ್ಪೂರ್ತಿದಾಯಕ ಭಾಷಣ. ಅವರ ಹೇಳಿಕೆಗಳು ರಾಷ್ಟ್ರೀಯ ಪ್ರಗತಿಯೆಡೆಗಿನ ಅವರ ಉತ್ಸಾಹವನ್ನು ತೋರಿಸುತ್ತವೆ ಮತ್ತು ಅವರು ನಮ್ಮ ಅಧ್ಯಕ್ಷರಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ,'' ಎಂದಿದ್ದಾರೆ.

 

 

 

*************



(Release ID: 1844584) Visitor Counter : 122