ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

Posted On: 25 JUL 2022 1:38PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಮತ್ತು ಸ್ಥಳೀಯ ಆಡಳಿತ ಸಾಧ್ಯವಾದ ಎಲ್ಲ ನೆರವು ನೀಡಲಿದೆ ಎಂದು  ಹೇಳಿದ್ದಾರೆ. 


ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ ಹೀಗೆ ಹೇಳಲಾಗಿದೆ.
“ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ನಲ್ಲಿ ನಡೆದ ರಸ್ತೆ ಅಪಘಾತವು ಅತ್ಯಂತ ದುಃಖ ತಂದಿದೆ. ಈ ಸಂದರ್ಭದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಜೊತೆಗೆ ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ನೆರವು ನೀಡುವ ಕಾರ್ಯದಲ್ಲಿ ತೊಡಗಿದೆ’’.

 


 

**************


(Release ID: 1844604)