ಪ್ರಧಾನ ಮಂತ್ರಿಯವರ ಕಛೇರಿ

ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀ ಜಗದೀಪ್ ಧಂಖರ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Posted On: 06 AUG 2022 10:03PM by PIB Bengaluru

ಭಾರತದ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀ ಜಗದೀಪ್ ಧಂಕರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು,

"ಪಕ್ಷಾತೀತವಾಗಿ ಅಭೂತಪೂರ್ವ ಬೆಂಬಲದೊಂದಿಗೆ ಭಾರತದ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀ ಜಗದೀಪ್ ಧಂಖರ್ ಜೀ ಅವರಿಗೆ ಅಭಿನಂದನೆಗಳು. ಅವರು ಅತ್ಯುತ್ತಮ ಉಪರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ. ಅವರ ಜ್ಞಾನ ಮತ್ತು ಬುದ್ಧಿವಂತಿಕೆಯಿಂದ ನಮ್ಮ ರಾಷ್ಟ್ರಕ್ಕೆ  ಅಪಾರ ಲಾಭವಾಗಲಿದೆ. @jdhankhar1"

 

"ಶ್ರೀ ಜಗದೀಪ್ ಧಂಖರ್ ಜೀ ಅವರಿಗೆ ಮತ ಚಲಾಯಿಸಿದ ಎಲ್ಲಾ ಸಂಸದರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಭಾರತವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಅತ್ಯುತ್ತಮ ಕಾನೂನು ಜ್ಞಾನ ಮತ್ತು ಬೌದ್ಧಿಕ ಪರಾಕ್ರಮವನ್ನು ಹೊಂದಿರುವ ಕೃಷಿಕ ಪುತ್ರನನ್ನು  ಉಪರಾಷ್ಟ್ರಪತಿಯನ್ನಾಗಿ ಹೊಂದುತ್ತಿರುವುದಕ್ಕೆ ನಾವು ಹೆಮ್ಮೆಪಡುತ್ತೇವೆ. @jdhankhar1".

ಎಂದು ಹೇಳಿದ್ದಾರೆ.

 

******************



(Release ID: 1850930) Visitor Counter : 104