ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಖ್ಯಾತ ಷೇರು ಹೂಡಿಕೆದಾರರಾದ ರಾಕೇಶ್ ಜುಂಜುನ್‌ವಾಲಾ ಅವರ ನಿಧನಕ್ಕೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ

ಪ್ರಕಟಣಾ ದಿನಾಂಕ: 14 AUG 2022 10:19AM by PIB Bengaluru

ಖ್ಯಾತ ಷೇರು ಹೂಡಿಕೆದಾರ ರಾಕೇಶ್ ಜುಂಜುನ್‌ವಾಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

 ಟ್ವೀಟ್‌ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

 

 "ರಾಕೇಶ್ ಜುಂಜುನ್‌ವಾಲಾ ಅದಮ್ಯ, ಜೀವನೋತ್ಸಾಹವುಳ್ಳ, ಹಾಸ್ಯಪ್ರವೃತ್ತಿಯ ಮತ್ತು ಒಳನೋಟವುಳ್ಳವರಾಗಿದ್ದರು, ಅವರು ಆರ್ಥಿಕ ಜಗತ್ತಿಗೆ ಮರೆಯಲಾಗದ ಕೊಡುಗೆಯನ್ನು ಬಿಟ್ಟು ಹೋಗಿದ್ದಾರೆ. ಅವರು ಭಾರತದ ಪ್ರಗತಿಯ ಬಗ್ಗೆ ತುಂಬಾ ಉತ್ಸುಕರಾಗಿದ್ದರು. ಅವರ ನಿಧನವು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ."

 

 

*********


(ಪ್ರಕಟಣೆ ಐ.ಡಿ.: 1851859) ವಿಸಿಟರ್ ಕೌಂಟರ್ : 184