ಪ್ರಧಾನ ಮಂತ್ರಿಯವರ ಕಛೇರಿ

ಕರ್ನಾಟಕ ಸಚಿವರಾದ ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 07 SEP 2022 10:14AM by PIB Bengaluru

ಕರ್ನಾಟಕ ಸರ್ಕಾರದ ಸಚಿವ ಶ್ರೀ ಉಮೇಶ್ ಕತ್ತಿಯವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿಯವರು ಟ್ವೀಟ್ ಮಾಡಿ, "ಶ್ರೀ ಉಮೇಶ್ ಕತ್ತಿ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ತಮ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಸದಸ್ಯರು ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು. ಓಂ ಶಾಂತಿ." ಎಂದು ಹೆಳಿದ್ದಾರೆ.

 

*****



(Release ID: 1857438) Visitor Counter : 157