ಪ್ರಧಾನ ಮಂತ್ರಿಯವರ ಕಛೇರಿ

ಅಹಮದಾಬಾದ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಿ ಸಂತಾಪ

Posted On: 14 SEP 2022 3:07PM by PIB Bengaluru

ಅಹಮದಾಬಾದ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ಅಪಘಾತದಿಂದಾಗಿರುವ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಸ್ಥಳೀಯ ಅಧಿಕಾರಿಗಳು ಎಲ್ಲ ರೀತಿಯ ನೆರವು ನೀಡುತ್ತಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ;

"ಅಹಮದಾಬಾದ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆ ತೀವ್ರ ದುಃಖ ತಂದಿದೆ. ಈ ದುರ್ಘಟನೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಅಧಿಕಾರಿಗಳು  ಸಾಧ್ಯವಿರುವ ಎಲ್ಲ ನೆರವನ್ನೂ ಸಂತ್ರಸ್ತರಿಗೆ ನೀಡುತ್ತಿದ್ದಾರೆ” ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆ ತೀವ್ರ ದುಃಖ ತಂದಿದೆ. ಈ ದುರ್ಘಟನೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಿ ಎಂದು ಹಾರೈಸುತ್ತೇನೆ. ಸ್ಥಳೀಯ ಅಧಿಕಾರಿಗಳು  ಸಾಧ್ಯವಿರುವ ಎಲ್ಲ ನೆರವನ್ನೂ ಸಂತ್ರಸ್ತರಿಗೆ ನೀಡುತ್ತಿದ್ದಾರೆ: ಪ್ರಧಾನಮಂತ್ರಿhttp://@narendramodi

*****

 



(Release ID: 1859207) Visitor Counter : 166