ಪ್ರಧಾನ ಮಂತ್ರಿಯವರ ಕಛೇರಿ

ಕೇಂದ್ರದ ಮಾಜಿ ಸಚಿವ ಶ್ರೀ ಮಾಣಿಕ್ ರಾವ್ ಗವಿತ್ ನಿಧನಕ್ಕೆ ಪ್ರಧಾನಿ ಸಂತಾಪ 

Posted On: 17 SEP 2022 7:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೇಂದ್ರದ ಮಾಜಿ ಸಚಿವ ಶ್ರೀ ಮಾಣಿಕ್ ರಾವ್ ಗವಿತ್  ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಪ್ರಧಾನಮಂತ್ರಿ ಕಚೇರಿ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ.

“ಕೇಂದ್ರದ ಮಾಜಿ ಸಚಿವ ಶ್ರೀ ಮಾಣಿಕ್ ರಾವ್ ಗವಿತ್ ಅವರ ನಿಧನದಿಂದ ದುಃಖವಾಗಿದೆ. ಅವರು ಅತ್ಯಂತ ಅನುಭವಿ ಸಂಸದರಾಗಿದ್ದರು ಮತ್ತು ಆದಿವಾಸಿ ಸಮುದಾಯದ ಸಬಲೀಕರಣಕ್ಕೆ ಅವರು ಹಲವು ಪ್ರಯತ್ನಗಳನ್ನು ಕೈಗೊಂಡಿದ್ದರು. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ಸಂತಾಪಗಳು. ಓಂ ಶಾಂತಿ.

*****



(Release ID: 1860286) Visitor Counter : 102