ಪ್ರಧಾನ ಮಂತ್ರಿಯವರ ಕಛೇರಿ

ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ ಅವರ ನಿಧನಕ್ಕೆ ಪ್ರಧಾನಿ ಸಂತಾಪ

Posted On: 21 SEP 2022 1:23PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ ಅವರ ನಿಧನಕ್ಕೆ  ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ

“ರಾಜು ಶ್ರೀವಾಸ್ತವ ಅವರು ನಗು, ಹಾಸ್ಯ ಮತ್ತು ಸಕಾರಾತ್ಮಕತೆಯಿಂದ ನಮ್ಮ ಜೀವನಕ್ಕೆ ಹೊಳಪು ನೀಡಿದ್ದಾರೆ. ಅವರು ಇಷ್ಟು ಬೇಗ ನಮ್ಮನ್ನು ಬಿಟ್ಟು ಅಗಲಿದ್ದಾರೆ, ಆದರೆ ಅವರು ಅಸಂಖ್ಯಾತ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ, ಇಷ್ಟು ವರ್ಷಗಳ ಅವರ ಶ್ರೀಮಂತ ಕಾರ್ಯಕ್ಕೆ ಧನ್ಯವಾದಗಳು. ಅವರ ನಿಧನ ದುಃಖ ತಂದಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ’’ ಎಂದು ಹೇಳಿದ್ದಾರೆ. 

*****

 



(Release ID: 1861123) Visitor Counter : 116