ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತ್ ನ ವಡೋದರಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಜೀವ ಹಾನಿಗೆ ಪ್ರಧಾನಿ ಸಂತಾಪ 


ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟ 

Posted On: 04 OCT 2022 4:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ವಡೋದರಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆದ ಜೀವ ಹಾನಿಗೆ ಸಂತಾಪ ಹಾಗೂ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿ ಅವರು ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ನಲ್ಲಿ ಹೀಗೆ ತಿಳಿಸಿದೆ.

“ವಡೋದರಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಜೀವ ಹಾನಿಯಿಂದ ದುಃಖವಾಗುತ್ತಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರವನ್ನು ಮತ್ತು ಗಾಯಗೊಂಡಿರುವವರಿಗೆ ತಲಾ 50,000 ಪರಿಹಾರ ನೀಡಲಾಗುವುದು.’’

 

******

 



(Release ID: 1865175) Visitor Counter : 112