ಪ್ರಧಾನ ಮಂತ್ರಿಯವರ ಕಛೇರಿ

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 11 OCT 2022 9:41AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;

"ಜೆಪಿ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಭಾರತಕ್ಕೆ ಅವರ ಕೊಡುಗೆ ಅನುಪಮವಾದ್ದು. ರಾಷ್ಟ್ರ ನಿರ್ಮಾಣಕ್ಕೆ ಅವರು ಲಕ್ಷಾಂತರ ಜನರನ್ನು ಪ್ರೇರೇಪಿಸಿದ್ದಾರೆ. ಪ್ರಜಾಪ್ರಭುತ್ವದ ಆದರ್ಶಗಳ ದಾರಿದೀಪವಾಗಿ ಅವರು ಸದಾ ಸ್ಮರಣೆಯಲ್ಲಿರುತ್ತಾರೆ." ಎಂದು ತಿಳಿಸಿದ್ದಾರೆ.

*****



(Release ID: 1866728) Visitor Counter : 130