ಗ್ರಾಮೀಣಾಭಿವೃದ್ಧಿ ಸಚಿವಾಲಯ
"ಗ್ರಾಮೀಣಾಭಿವೃದ್ಧಿಗಾಗಿ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರಿಗೆ ಕಾರ್ಯಸೂಚಿ" ಕುರಿತಾದ ಕೈಪಿಡಿಯನ್ನು ಕೇಂದ್ರ ಸಚಿವರಾದ ಶ್ರೀ ಗಿರಿರಾಜ್ ಸಿಂಗ್ ಅವರು ಲೋಕಾರ್ಪಣೆಗೊಳಿಸಿದರು.
ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಸೇರಿದಂತೆ ಎಲ್ಲರೂ ಯೋಜನೆಗಳು ಮತ್ತು ಅವುಗಳ ಅಪೇಕ್ಷಣೀಯತೆ ಅರ್ಥಮಾಡಿಕೊಳ್ಳಲು ಈ ಕೈಪಿಡಿ ಸಹಾಯ ಮಾಡುತ್ತದೆ, ಅಲ್ಲದೆ ಇದು ಪಾರದರ್ಶಕತೆ ಮತ್ತು ಸಾರ್ವಜನಿಕ ಭಾಗವಹಿಸುವಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ: ಶ್ರೀ ಗಿರಿರಾಜ್ ಸಿಂಗ್
Posted On:
04 NOV 2022 5:16PM by PIB Bengaluru
ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಶ್ರೀ ಗಿರಿರಾಜ್ ಸಿಂಗ್ ಅವರು "ಗ್ರಾಮೀಣಾಭಿವೃದ್ಧಿಗಾಗಿ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರಿಗೆ ಕಾರ್ಯಸೂಚಿ" ಎಂಬ ಕೈಪಿಡಿಯನ್ನು ಅನಾವರಣಗೊಳಿಸಿದರು. ಈ ಕೈಪಿಡಿಯ ಮೂಲಕ, MGNREGA, ದೀನ್ ದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್, ಮುಂತಾದ ಯೋಜನೆಗಳ ಬಗ್ಗೆ ಮಾಹಿತಿ, ಪ್ರಧಾನಮಂತ್ರಿ ಆವಾಸ್ ಯೋಜನೆ- ಗ್ರಾಮೀಣ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಇತ್ಯಾದಿಗಳ ಬಗ್ಗೆ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುತ್ತದೆ. ಈ ಕೈಪಿಡಿಯನ್ನು ಶೀಘ್ರದಲ್ಲೇ ಪ್ರಾದೇಶಿಕ ಭಾಷೆಗಳಲ್ಲಿ ತರ್ಜುಮೆಗೊಳಿಸಲಾಗುವುದು.
ದೇಶದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಈ ಕೈಪಿಡಿ ಲಭ್ಯವಾಗಲಿದ್ದು, ಗ್ರಾಮ ಪಂಚಾಯಿತಿಗಳ ಸದಸ್ಯರ ಮಧ್ಯೆ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವಿವಿಧ ಯೋಜನೆಗಳ ಕುರಿತು ಅರ್ಥಪೂರ್ಣ ಚರ್ಚೆಗೆ ಇದು ಅವಕಾಶ ಕಲ್ಪಿಸಲಿದೆ ಎಂದು ಸಚಿವರು ತಿಳಿಸಿದರು. ಈ ಕೈಪಿಡಿ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರು ಸೇರಿದಂತೆ ಪ್ರತಿಯೊಬ್ಬರಿಗೂ ಯೋಜನೆಗಳು ಮತ್ತು ಅವರ ಕಾರ್ಯಕ್ಷಮತೆ ಬಗ್ಗೆ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ಪಾರದರ್ಶಕತೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.
![](https://static.pib.gov.in/WriteReadData/userfiles/image/image002MM5X.jpg)
ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತ ಸರ್ಕಾರದ ಅಧಿಕಾರಿಗಳಿಗೆ ಈ ಕೈಪಿಡಿ ಸಹಕಾರಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಕಾರ್ಯದರ್ಶಿ, ಶೇ. ಎನ್.ಎನ್.ಸಿನ್ಹಾ ಹೇಳಿದರು.
Link of Booklet
****
(Release ID: 1873979)
Visitor Counter : 290