ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದಾಲ್ ಸರೋವರದಲ್ಲಿ ಭಾರತದ ಮೊದಲ ತೇಲುವ ಆರ್ಥಿಕ ಸಾಕ್ಷರತಾ ಶಿಬಿರ ಆಯೋಜಿಸಿರುವ ಐಪಿಬಿಪಿಗೆ ಪ್ರಧಾನಿ ಶ್ಲಾಘನೆ

ಪ್ರಕಟಣಾ ದಿನಾಂಕ: 05 NOV 2022 11:24AM by PIB Bengaluru

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ದಾಲ್ ಸರೋವರದಲ್ಲಿ ಭಾರತದ ಮೊದಲ ತೇಲುವ ಆರ್ಥಿಕ ಸಾಕ್ಷರತಾ ಶಿಬಿರವನ್ನು ನಿವೇಶಕ್ ದೀದಿ ಅಡಿಯಲ್ಲಿ ಆಯೋಜಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಬಿಪಿ) ಅನ್ನು ಶ್ಲಾಘಿಸಿದ್ದಾರೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮಾಡಿದ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದಾರೆ.

"ಮಹಿಳಾ ಸಬಲೀಕರಣವನ್ನು ಮತ್ತಷ್ಟು ಹೆಚ್ಚಿಸುವ ಅದ್ಭುತವಾದ ಉಪಕ್ರಮ!" ಎಂದು ಪ್ರಧಾನಿ ಟ್ವೀಟ್ ನಲ್ಲಿ ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1873981) ವಿಸಿಟರ್ ಕೌಂಟರ್ : 223