ಪ್ರಧಾನ ಮಂತ್ರಿಯವರ ಕಛೇರಿ

ʻಕಾಶಿ ತಮಿಳು ಸಂಗಮಂʼ ಬಗ್ಗೆ ನಾಗರಿಕರ ಅಭಿಪ್ರಾಯಕ್ಕೆ ಪ್ರಧಾನಿ ಪ್ರತಿಕ್ರಿಯೆ


ʻಕಾಶಿ ತಮಿಳು ಸಂಗಮಂʼ ಅತ್ಯಂತ ನವೀನ ಕಾರ್ಯಕ್ರಮವಾಗಿದ್ದು, ಇದು ಸಾಂಸ್ಕೃತಿಕ ವಿನಿಮಯಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ಭಾರತದ ಸಾಂಸ್ಕೃತಿಕ ವೈವಿಧ್ಯವನ್ನು ಆಚರಿಸುತ್ತದೆ: ಪ್ರಧಾನಿ

Posted On: 20 NOV 2022 9:56AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಾವು ನಿನ್ನೆ ಪ್ರಾರಂಭಿಸಿದ `ಕಾಶಿ ತಮಿಳು ಸಂಗಮ’ದ ಬಗ್ಗೆ ನಾಗರಿಕರ ಸ್ಪಂದನೆಗೆ ಪ್ರತಿಕ್ರಿಯಿಸಿದ್ದಾರೆ. ದೇಶದ ಅತ್ಯಂತ ಪ್ರಮುಖ ಮತ್ತು ಪ್ರಾಚೀನ ಕಲಿಕಾ ಕೇಂದ್ರಗಳಾದ ತಮಿಳುನಾಡು ಮತ್ತು ಕಾಶಿ ನಡುವಿನ ಹಳೆಯ ಸಂಬಂಧಗಳನ್ನು ಪುನರುಚ್ಚರಿಸುವ ಮತ್ತು ಮರುಶೋಧಿಸುವ ಉಪಕ್ರಮಕ್ಕೆ ನಾಗರಿಕರು ಉತ್ಸಾಹದಿಂದ ಸ್ಪಂದಿಸಿದ್ದಾರೆ.

ಕಾಶಿ ಮತ್ತು ತಮಿಳುನಾಡಿನ ಶ್ರೇಷ್ಠ ಪರಂಪರೆಯ ಬಗ್ಗೆ ಜನರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವ ಮೂಲಕ ಪ್ರಧಾನಮಂತ್ರಿಯವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

 

 

*****



(Release ID: 1877547) Visitor Counter : 111