ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ

प्रविष्टि तिथि: 20 NOV 2022 11:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದರು.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್)ಯಿಂದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

" ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ಅಪಘಾತವು ದುಃಖಕರವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಪಿಎಂಎನ್ಆರ್ ಎಫ್ ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮೃತರ ಕುಟುಂಬಗಳಿಗೆ ನೀಡಲಾಗುವುದು. ಹಾಗೆಯೇ ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ @narendramodi,’’ ಎಂದು ಹೇಳಿದೆ.

*****


(रिलीज़ आईडी: 1877899) आगंतुक पटल : 161
इस विज्ञप्ति को इन भाषाओं में पढ़ें: Telugu , English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Malayalam