ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರದ ಮೋತಿಹಾರಿಯಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ


ಪಿಎಂಎನ್‌ಆರ್‌ಎಫ್ ನಿಂದ ಪರಿಹಾರ ಘೋಷಣೆ

Posted On: 24 DEC 2022 9:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಬಿಹಾರದ ಮೋತಿಹಾರಿಯಲ್ಲಿರುವ ಇಟ್ಟಿಗೆ ಕಾರ್ಖಾನೆಯಲ್ಲಿ  ಸಂಭವಿಸಿದ ಅಪಘಾತದಲ್ಲಿ ಉಂಟಾದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂಪಾಯಿ ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯದ ಟ್ವೀಟ್;

“ಮೋತಿಹಾರಿಯ ಇಟ್ಟಿಗೆ ಭಟ್ಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ದುಃಖ ತಂದಿದೆ.. ಗಾಯಗೊಂಡವರಿಗೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಪ್ರತಿ ಮೃತರ ಕುಟುಂಬದವರಿಗೆ   ಪಿಎಂಎನ್‌ಆರ್‌ಎಫ್ ನಿಧಿಯಿಂದ ಎರಡು ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುತ್ತದೆ. ಗಾಯಗೊಂಡವರಿಗೆ ರೂ 50,000 ನೀಡಲಾಗುವುದು: ಪ್ರಧಾನಮಂತ್ರಿ @narendramodi

******


(Release ID: 1886363) Visitor Counter : 168