ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಸಿದ್ದೇಶ್ವರ ಸ್ವಾಮಿಗಳ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 02 JAN 2023 11:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿದ್ದೇಶ್ವರ ಸ್ವಾಮಿಗಳ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅಸಾಧಾರಣ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ, 

“ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅಸಾಧಾರಣ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು. ಇತರರ ಒಳಿತಿಗಾಗಿ ಅವರು ದಣಿವರಿಯದೆ ದುಡಿದರು ಮತ್ತು ಅವರ ವಿದ್ವತ್ಪೂರ್ಣ ಹುರುಪಿನಿಂದ ಗೌರವಿಸಲ್ಪಟ್ಟಿದ್ದಾರೆ. ಈ ದುಃಖದ ಸಮಯದಲ್ಲಿ, ನನ್ನ ಸಂವೇದನೆ ಅವರ ಅಸಂಖ್ಯಾತ ಭಕ್ತರೊಂದಿಗೆ ಇದೆ. ಓಂ ಶಾಂತಿ." ಎಂದು ಹೇಳಿದ್ದಾರೆ. 

*****



(Release ID: 1888216) Visitor Counter : 174