ಪ್ರಧಾನ ಮಂತ್ರಿಯವರ ಕಛೇರಿ
ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On:
12 JAN 2023 8:55AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರ ಜೀವನವು ಸದಾ ದೇಶಭಕ್ತಿ, ಆಧ್ಯಾತ್ಮಿಕತೆ ಮತ್ತು ಕಠಿಣ ಪರಿಶ್ರಮವನ್ನು ಪ್ರೇರೇಪಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.
ಈ ಕುರಿತು ಪ್ರಧಾನಮಂತ್ರಿ ಅವರು ಟ್ವೀಟ್ ಮಾಡಿದ್ದು,"
ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನಗಳು. ಅವರ ಜೀವನವು ಯಾವಾಗಲೂ ದೇಶಭಕ್ತಿ, ಆಧ್ಯಾತ್ಮಿಕತೆ ಮತ್ತು ಶ್ರದ್ಧೆಯನ್ನು ಪ್ರೇರೇಪಿಸುತ್ತದೆ. ಅವರ ಉದಾತ್ತ ಚಿಂತನೆಗಳು ಮತ್ತು ಆದರ್ಶಗಳು ದೇಶವಾಸಿಗಳಿಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ," ಎಂದು ಹೇಳಿದ್ದಾರೆ.
*****
(Release ID: 1890609)
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam