ಪ್ರಧಾನ ಮಂತ್ರಿಯವರ ಕಛೇರಿ

ನಾಸಿಕ್-ಶಿರಡಿ ಹೆದ್ದಾರಿಯ ಅಪಘಾತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ


ಹಾನಿಗೊಂಡವರ ಕುಟುಂಬಕ್ಕೆ ಪಿ.ಎಂ.ಎನ್.ಆರ್.ಎಫ್. ನಿಂದ ಪರಿಹಾರ ಘೋಷಿಸಲಾಗಿದೆ

Posted On: 13 JAN 2023 12:00PM by PIB Bengaluru

ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್‌.ಆರ್‌.ಎಫ್.) ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯವು ಈ ರೀತಿ ಟ್ವೀಟ್ ಮಾಡಿದೆ;

"ನಾಸಿಕ್-ಶಿರಡಿ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಆಗಿರುವ ಪ್ರಾಣಹಾನಿಯಿಂದ ಬಹಳ ನೋವಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ಪಿ.ಎಂ.ಎನ್‌.ಆರ್‌.ಎಫ್.ನಿಂದ  ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರವನ್ನು ನೀಡಲಾಗುವುದು: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

***



(Release ID: 1890971) Visitor Counter : 97