ಪ್ರಧಾನ ಮಂತ್ರಿಯವರ ಕಛೇರಿ

​​​​​​​ಮಣಿಪುರದ ಜನತೆಗೆ ರಾಜ್ಯೋದಯದ ಶುಭಾಶಯ ತಿಳಿಸಿದ ಪ್ರಧಾನ ಮಂತ್ರಿಗಳು

Posted On: 21 JAN 2023 10:01AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಣಿಪುರ ರಾಜ್ಯದ ಜನತೆಗೆ ರಾಜ್ಯೋದಯದ ಶುಭಾಶಯ ತಿಳಿಸಿದ್ದಾರೆ.

ಈ ಸಂಬಂಧ ಟ್ಚೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

"ಮಣಿಪುರದ ಜನತೆಗೆ ರಾಜ್ಯೋದಯದ ಶುಭಾಶಯಗಳು. ಕಳೆದ ಕೆಲ ವರ್ಷಗಳಲ್ಲಿ ರಾಜ್ಯವು ನಾನಾ ವಲಯಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ. ಮಣಿಪುರ ರಾಜ್ಯದ ಜನತೆಯ ಆಕಾಂಕ್ಷೆಗಳೆಲ್ಲಾ ಈಡೇರಲಿ ಹಾಗೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಭಾರತವನ್ನು ಬಲಪಡಿಸುವ ಕಾರ್ಯವನ್ನು ಮಣಿಪುರ ಮುಂದುವರಿಸಲಿ ಎಂದು ಪ್ರಾರ್ಥಿಸುತ್ತೇನೆ," ಎಂದು ಆಶಿಸಿದ್ದಾರೆ.

***



(Release ID: 1892741) Visitor Counter : 108