ಪ್ರಧಾನ ಮಂತ್ರಿಯವರ ಕಛೇರಿ

ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಹೇಳಿದ ಪ್ರಧಾನ ಮಂತ್ರಿಗಳು

Posted On: 26 JAN 2023 8:54AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೇಶದ ಜನತೆಗೆ  ಶುಭಾಶಯ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

"ಗಣರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಶುಭಾಶಯ ತಿಳಿಸುತ್ತೇನೆ. ಈ ಬಾರಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ವಿಶೇಷ. ದೇಶದ ಮಹಾನ್ ಸ್ವಾತಂತ್ರ್ಯ ಯೋಧರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲಾ ಒಂದಾಗಿ ಮುಂದಾಗೋಣ ಎಂಬುದು ನನ್ನ ಆಶಯ. ಭಾರತೀಯರಿಗೆಲ್ಲಾ ಗಣರಾಜ್ಯೋತ್ಸವದ ಶುಭಾಶಯಗಳು," ಎಂದು ಹಾರೈಸಿದ್ದಾರೆ.

*****

 



(Release ID: 1893984) Visitor Counter : 110