ಪ್ರಧಾನ ಮಂತ್ರಿಯವರ ಕಛೇರಿ

ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 06 FEB 2023 12:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಟರ್ಕಿ ಅಧ್ಯಕ್ಷರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ;

"ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಿಂದ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಭಾರತವು ಟರ್ಕಿಯ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಮತ್ತು ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ನೀಡಲು ಸಿದ್ಧವಾಗಿದೆ,’’ ಎಂದು ಹೇಳಿದ್ದಾರೆ.

***



(Release ID: 1896593) Visitor Counter : 125