ಪ್ರಧಾನ ಮಂತ್ರಿಯವರ ಕಛೇರಿ

ಭಾರತವು ಟರ್ಕಿಯ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ: ಪ್ರಧಾನಮಂತ್ರಿ

Posted On: 10 FEB 2023 7:35PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 'ಆಪರೇಷನ್ ದೋಸ್ತ್' ಅಡಿಯಲ್ಲಿ ಗರಿಷ್ಠ ಜೀವಗಳನ್ನು ಉಳಿಸಲು ಭಾರತ ಪ್ರಯತ್ನಿಸುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

ಟರ್ಕಿಯಲ್ಲಿ ಭಾರತೀಯ ತಂಡ ವಹಿಸುತ್ತಿರುವ ಪಾತ್ರದ ಬಗ್ಗೆ ಎಂಇಎ ಮಾಡಿದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು ಹೀಗೆ ಟ್ವೀಟ್ ಮಾಡಿದ್ದಾರೆ:

“ ' ಆಪರೇಷನ್ ದೋಸ್ತ್ ' ಭಾಗವಾಗಿ ನಮ್ಮ ತಂಡಗಳು ಹಗಲು ರಾತ್ರಿ ಕೆಲಸ ಮಾಡುತ್ತಿವೆ. ಗರಿಷ್ಠ ಜೀವಗಳು ಮತ್ತು ಆಸ್ತಿಯನ್ನು ಉಳಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅವರು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಲೇ ಇರುತ್ತಾರೆ. ಈ ನಿರ್ಣಾಯಕ ಸಮಯದಲ್ಲಿ, ಭಾರತವು ಟರ್ಕಿಯೆ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ,’’ ಎಂದಿದ್ದಾರೆ.

*****



(Release ID: 1898411) Visitor Counter : 113