ಪ್ರಧಾನ ಮಂತ್ರಿಯವರ ಕಛೇರಿ

ನಾವೀನ್ಯತೆ ಮತ್ತು ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡಿರುವ ವೈದ್ಯರಿಗೆ ಪ್ರಧಾನಮಂತ್ರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು

Posted On: 13 FEB 2023 9:17AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈದ್ಯರು ಯಾವಾಗಲೂ ನಾವೀನ್ಯತೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಮತ್ತು ವೈದ್ಯಕೀಯ ಜಗತ್ತಿನಲ್ಲಿ ಹೊಸ ಬದಲಾವಣೆಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರನ್ನು ಶ್ಲಾಘಿಸಿದರು.

ಭುಬನೇಶ್ವರದ  ಏಮ್ಸ್ ಆಸ್ಪತ್ರೆಯಲ್ಲಿ ಅಂಗವಿಕಲ ರೋಗಿಯೊಬ್ಬರಿಗೆ ಕ್ವಾಡ್ರುಪಲ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಒಡಿಶಾದಲ್ಲಿ ಇದೇ ಮೊದಲ ಪ್ರಕರಣವಾಗಿದ್ದು  ವಿಶ್ವದಲ್ಲಿ ಎರಡನೇ ಪ್ರಕರಣವಾಗಿದೆ.
 
ಏಮ್ಸ್ ಭುಬನೇಶ್ವರದ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ, ಪ್ರಧಾನಮಂತ್ರಿಯವರು ಹೀಗೆ  ಹೇಳಿದ್ದಾರೆ: 
" ಯಾವಾಗಲೂ ನಾವೀನ್ಯತೆಯಲ್ಲಿ ಮುಂಚೂಣಿಯಲ್ಲಿರುವ ಮತ್ತು ವೈದ್ಯಕೀಯ ಜಗತ್ತಿನಲ್ಲಿ ಹೊಸ ಬದಲಾವಣೆಗಳನ್ನು ಅಳವಡಿಸಿಕೊಳ್ಳುವ ನಮ್ಮ ವೈದ್ಯರಿಗೆ ಅಭಿನಂದನೆಗಳು. ಅವರ ಪರಿಣತಿ ನಮಗೆ ಹೆಮ್ಮೆ ತರುತ್ತದೆ!

*******



(Release ID: 1898733) Visitor Counter : 149