ಪ್ರಧಾನ ಮಂತ್ರಿಯವರ ಕಛೇರಿ

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತವನ್ನು ರೂಪಿಸುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 17 FEB 2023 10:28AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮುಕ್ತ ಎಕರೆ ಪರವಾನಗಿ ನೀತಿಯಡಿ ಒಡಿಶಾದ ಮಹಾನದಿ ಕಡಲತೀರದ ಜಲಾನಯನ ಪ್ರದೇಶದಲ್ಲಿ ಮೊದಲ ಅನ್ವೇಷಣಾ ಬಾವಿ ಪುರಿ-1 ಅನ್ನು ಪ್ರಾರಂಭಿಸುವ ಮೂಲಕ ಇಂಧನ ಕ್ಷೇತ್ರದಲ್ಲಿ ಭಾರತವನ್ನು ಆತ್ಮನಿರ್ಭರವನ್ನಾಗಿ ಮಾಡುವ ನಿಟ್ಟಿನಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ ನ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ ಅವರ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು, ಈ ಕುರಿತು ಟ್ವೀಟ್ ಮಾಡಿದ್ದಾರೆ.

"ಇದು ಗಮನಾರ್ಹವಾಗಿದೆ ಮತ್ತು ಇದು ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರರಾಗುವ ನಮ್ಮ ಪ್ರಯತ್ನಗಳನ್ನು ಉತ್ತೇಜಿಸುತ್ತದೆ." ಎಂದು ಹೇಳಿದ್ದಾರೆ.

*****



(Release ID: 1900138) Visitor Counter : 148