ಪ್ರಧಾನ ಮಂತ್ರಿಯವರ ಕಛೇರಿ

​​​​​​​ಖ್ಯಾತ ಯಕ್ಷಗಾನ ಹಿನ್ನೆಲೆ ಗಾಯಕ ಶ್ರೀ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 17 FEB 2023 10:26AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಖ್ಯಾತ ಯಕ್ಷಗಾನ ಹಿನ್ನೆಲೆ ಗಾಯಕ ಶ್ರೀ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್  ಮಾಡಿರುವ ಪ್ರಧಾನಮಂತ್ರಿ;

"ಶ್ರೀ ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಗಾಗಿ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆ ಮೆಚ್ಚುತ್ತದೆ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ." ಎಂದು ಹೇಳಿದ್ದಾರೆ.

*****



(Release ID: 1900141) Visitor Counter : 186