ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿದ್ಯುತ್ ಸ್ಪರ್ಶದಿಂದ ಆನೆಯನ್ನು ರಕ್ಷಿಸಿದ ಬಂಡೀಪುರ ಹುಲಿ ರಕ್ಷಿತಾರಣ್ಯದ ಸಿಬ್ಬಂದಿಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 18 FEB 2023 9:26AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿದ್ಯುತ್ ಆಘಾತಕ್ಕೊಳಗಾದ ಆನೆಯನ್ನು ರಕ್ಷಿಸಿದ್ದಕ್ಕಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ ಮತ್ತು ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಶ್ಲಾಘನೀಯ ಎಂದು ಹೇಳಿದರು.

ಕೇಂದ್ರ ಸಂಪುಟದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಮತ್ತು ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಟ್ವೀಟ್ ಗೆ ಪ್ರತಿಕ್ರಿಯೆಯಾಗಿ  ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ;

"ಇದನ್ನು ನೋಡಿ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಶ್ಲಾಘನೀಯ.’’ ಎಂದು ಹೇಳಿದರು.

***


(ಪ್ರಕಟಣೆ ಐ.ಡಿ.: 1900368) ವಿಸಿಟರ್ ಕೌಂಟರ್ : 159