ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಶ್ರೀ ಎಎಂ ಅಹ್ಮದಿ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 03 MAR 2023 6:12PM by PIB Bengaluru

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಶ್ರೀ ಎಎಂ ಅಹ್ಮದಿ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,

''ಮಾಜಿ ಮುಖ್ಯ ನ್ಯಾಯಮೂರ್ತಿ ಶ್ರೀ ಎಎಂ ಅಹ್ಮದಿ ಅವರ ನಿಧನವಾರ್ತೆ ನೋವು ತಂದಿದೆ. ಅವರು ವಕೀಲರಾಗಿ ಮತ್ತು ನ್ಯಾಯಾಧೀಶರಾಗಿ ಅದ್ವಿತೀಯ ವೃತ್ತಿಜೀವನ ನಡೆಸಿದ್ದರು. ನಮ್ಮ ನ್ಯಾಯಾಂಗ ವ್ಯವಸ್ಥೆ ಹೆಚ್ಚು ಪರಿಣಾಮಕಾರಿಯಾಗುವಲ್ಲಿ ಅವರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಟ್ವೀಟ್ ಮಾಡಿದ್ದಾರೆ.


(ಪ್ರಕಟಣೆ ಐ.ಡಿ.: 1904088) ವಿಸಿಟರ್ ಕೌಂಟರ್ : 167