ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಅವರಿಂದ ಗೌರವ ಸಲ್ಲಿಕೆ

Posted On: 19 MAR 2023 7:33PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ದಿನ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು;

“ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿಯಂದು ನಾನು ಅವರಿಗೆ ನಮನ ಸಲ್ಲಿಸುತ್ತೇನೆ. ಸಮಾಜದಲ್ಲಿ ಅಸಮಾನತೆಯನ್ನು ಹೋಗಲಾಡಿಸುವಲ್ಲಿ ಮತ್ತು ಸಾಮರಸ್ಯವನ್ನು ಹೆಚ್ಚಿಸುವಲ್ಲಿ ಅವರ ಪಾತ್ರವು ಅಪ್ರತಿಮವಾಗಿದೆ. ಸಾಮಾಜಿಕ ನ್ಯಾಯಕ್ಕೆ ಅವರು ಒತ್ತು ನೀಡುತ್ತಿದ್ದರು. ಜನರು ಶಿಕ್ಷಿತರಾಗಬೇಕೆಂದು ಸಹ ಬಯಸುತ್ತಿದ್ದ ಅವರು ಅದಕ್ಕಾಗಿ ಕೆಲಸ ಮಾಡುತ್ತಿದ್ದರು. ಅವರ ಆದರ್ಶಗಳನ್ನು ಈಡೇರಿಸಲು ನಾವು ಶ್ರಮಿಸುತ್ತೇವೆ'' ಎಂದು ಬರೆದುಕೊಂಡಿದ್ದಾರೆ.

***



(Release ID: 1908605) Visitor Counter : 76