ಗೃಹ ವ್ಯವಹಾರಗಳ ಸಚಿವಾಲಯ

ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2023 ನೇ ಸಾಲಿನ ಮೂರು ಪದ್ಮ ವಿಭೂಷಣ, ನಾಲ್ಕು ಪದ್ಮಭೂಷಣ ಮತ್ತು ನಲವತ್ತೇಳು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

Posted On: 22 MAR 2023 8:18PM by PIB Bengaluru

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ  ಇಂದು (ಮಾರ್ಚ್ 22, 2023) ಭವ್ಯವಾದ  ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು ಮತ್ತು ಅದರಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2023 ನೇ ಸಾಲಿನ ಮೂರು ಪದ್ಮ ವಿಭೂಷಣ, ನಾಲ್ಕು ಪದ್ಮಭೂಷಣ ಮತ್ತು ನಲವತ್ತೇಳು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನ್ಕರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ, ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ,ಹಾಗು  ಕೇಂದ್ರದ ಇತರ ಸಚಿವರು ಮತ್ತು ಗಣ್ಯರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭದ ನಂತರ, ಕೇಂದ್ರ ಗೃಹ ವ್ಯವಹಾರಗಳ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಹೊಸದಿಲ್ಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವರು ಮತ್ತು ಸಹಕಾರ ಸಚಿವರು ಆಯೋಜಿಸಿದ್ದ ಔತಣಕೂಟದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಪದ್ಮ ಪ್ರಶಸ್ತಿ ಪುರಸ್ಕೃತರು ನಾಳೆ (ಮಾರ್ಚ್ 23, 2023) ಬೆಳಿಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಗೌರವ ಸಲ್ಲಿಸಲಿದ್ದಾರೆ. ಅವರು ಅಮೃತ ಉದ್ಯಾನ ಮತ್ತು ರಾಷ್ಟ್ರಪತಿ ಭವನಕ್ಕೂ ಭೇಟಿ ನೀಡಲಿದ್ದಾರೆ ಮತ್ತು ಪ್ರಧಾನ ಮಂತ್ರಿ ಸಂಗ್ರಾಹಾಲಯಕ್ಕೂ ಭೇಟಿ ನೀಡಲಿದ್ದಾರೆ.

****



(Release ID: 1909738) Visitor Counter : 151