ಪ್ರಧಾನ ಮಂತ್ರಿಯವರ ಕಛೇರಿ

ಇಂದೋರ್ ನಲ್ಲಿ ಸಂಭವಿಸಿದ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿಯವರು ನೋವು ವ್ಯಕ್ತಪಡಿಸಿದ್ದಾರೆ

Posted On: 30 MAR 2023 2:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದೋರ್ ನಲ್ಲಿ ಸಂಭವಿಸಿದ ದುರ್ಘಟನೆಯ ಬಗ್ಗೆ ನೋವು ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

ಟ್ವೀಟರ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;

"ಇಂದೋರ್ ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ.  ನಾನು ಮುಖ್ಯಮಂತ್ರಿ @ChouhanShivraj  ಜೀ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಕುರಿತು  ಕೇಳಿದೆನು. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು  ನಡೆಸುತ್ತಿದೆ. ನನ್ನ ಪ್ರಾರ್ಥನೆಗಳು ಎಲ್ಲಾ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ಇವೆ.  "

 

****



(Release ID: 1912311) Visitor Counter : 83