ಪ್ರಧಾನ ಮಂತ್ರಿಯವರ ಕಛೇರಿ

ಸೌರಾಷ್ಟ್ರ ತಮಿಳು ಸಂಗಮದಲ್ಲಿ ಭಾಗವಹಿಸಿದವರಿಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 17 APR 2023 10:25AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸೌರಾಷ್ಟ್ರ ತಮಿಳು ಸಂಗಮದಲ್ಲಿ ಪಾಲ್ಗೊಂಡ ಜನತೆಗೆ ಶುಭ ಕೋರಿದ್ದಾರೆ. 

ಸೌರಾಷ್ಟ್ರ ತಮಿಳು ಸಂಗಮಂನ ಟ್ವೀಟ್ ಅನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು: 

"ಮಹತ್ವವಾದ ಎಸ್ ಟಿ ಸಂಗಮಂ ಪ್ರಾರಂಭವಾಗುತ್ತಿದೆ. ಇದರಲ್ಲಿ ಭಾಗವಹಿಸುತ್ತಿರುವ ಎಲ್ಲರಿಗೂ ನಾನು ಶುಭ ಹಾರೈಸುತ್ತೇನೆ. ಗುಜರಾತ್ ನ ಸೌರಾಷ್ಟ್ರ ಮತ್ತು ತಮಿಳುನಾಡಿನ ನಡುವಿನ ಸಂಬಂಧ ಪುರಾತನವಾಗಿದ್ದು, ತುಂಬಾ ಪ್ರಬಲವಾಗಿದೆ. ಈ ಸಂಗಮವು ಸಾಂಸ್ಕೃತಿಕ ಸಂಪರ್ಕ ಹಾಗೂ 'ಏಕ್ ಭಾರತ್, ಶ್ರೇಷ್ಠ ಭಾರತ್' ಮನೋಭಾವವನ್ನು ಹೆಚ್ಚಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.

 

***



(Release ID: 1921944) Visitor Counter : 95