ಪ್ರಧಾನ ಮಂತ್ರಿಯವರ ಕಛೇರಿ

ಪಂಜಾಬ್ ನ ಹೋಷಿಯಾರ್ಪುರದಲ್ಲಿ ಅಪಘಾತ : ಪ್ರಧಾನಿ ಸಂತಾಪ


ಮೃತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಪ್ರಕಟ

Posted On: 14 APR 2023 8:46AM by PIB Bengaluru

ಪಂಜಾಬ್ ನ ಹೋಷಿಯಾರ್ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಘಟನೆ ಸಂಬಂಧ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್ಆರ್ ಎಫ್) ನಿಂದ ಅಪಘಾತ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯದ ಟ್ವೀಟ್ ಹೀಗಿದೆ:

“ಪಂಜಾಬ್ ನ ಹೋಷಿಯಾರ್ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿ ಪಿ ಎಂ ಎನ್ ಆರ್ ಎಫ್ ನಿಂದ ಮೃತರ ಕಾನೂನು ವಾರಸುದಾರರಿಗೆ ಎರಡು ಲಕ್ಷ ರೂಪಾಯಿಗಳ ಎಕ್ಸ್ ಗ್ರೇಷಿಯಾ ಪ್ರಕಟಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು”

 

***



(Release ID: 1922445) Visitor Counter : 70