ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

12 ಕೋಟಿ ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ಕಲ್ಪಿಸಿದ ಸಾಧನೆಗೆ  ಪ್ರಧಾನಮಂತ್ರಿ ಮೆಚ್ಚುಗೆ

ಪ್ರಕಟಣಾ ದಿನಾಂಕ: 17 MAY 2023 1:34PM by PIB Bengaluru

ಜಲ ಜೀವನ ಅಭಿಯಾನದ ಅಡಿಯಲ್ಲಿ 12 ಕೋಟಿ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಿರುವ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿಯವರು:

"ಈ ಅದ್ಭುತ ಸಾಧನೆಗಾಗಿ ಅನೇಕ ಅಭಿನಂದನೆಗಳು! ಹಳ್ಳಿಗಳಿಗೆ ಮತ್ತು ಬಡವರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ನಮ್ಮ ಪ್ರಯತ್ನಗಳು ನಿರಂತರವಾಗಿ ಫಲಿತಾಂಶಗಳನ್ನು ನೀಡುತ್ತಿವೆ ಎಂಬುದು ಬಹಳ ಸಂತೋಷದ ವಿಷಯವಾಗಿದೆ."

(“इस शानदार उपलब्धि के लिए बहुत-बहुत बधाई! यह अत्यंत खुशी की बात है कि गांवों और गरीबों तक हर जरूरी सुविधा पहुंचाने के हमारे प्रयासों के सुपरिणाम निरंतर सामने आ रहे हैं।”) ಎಂದು ತಿಳಿಸಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 1925034) ವಿಸಿಟರ್ ಕೌಂಟರ್ : 163