ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ


ಸಂತ್ರಸ್ತರಿಗೆ ಪಿ.ಎಂ. ಎನ್. ಆರ್ .ಎಫ್ ನಿಂದ ಪರಿಹಾರ ಘೋಷಣೆ

Posted On: 09 MAY 2023 11:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ.
ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

"खरगोन में हुआ सड़क हादसा अत्यंत दुखद है। इसमें जिन लोगों ने अपने प्रियजनों को खोया है, उनके प्रति मेरी शोक-संवेदनाएं। इसके साथ ही मैं सभी घायलों के शीघ्र स्वस्थ होने की कामना करता हूं। राज्य सरकार की देखरेख में स्थानीय प्रशासन मौके पर हरसंभव मदद में जुटा है: ಪಿಎಂ".

"ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪಿ.ಎಂ.ಎನ್.ಆರ್.ಎಫ್ ನಿಂದ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ ನೀಡಲಾಗುವುದು : ಪಿ.ಎಂ."

 

 

****



(Release ID: 1926250) Visitor Counter : 87