ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಪರಿಸ್ಥಿತಿಯನ್ನು ಅವಲೋಕಿಸಲು ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಪ್ರಧಾನಮಂತ್ರಿ
ಘಟನೆಯ ಪರಿಸ್ಥಿತಿ ಅವಲೋಕಿಸಲು ಪ್ರಧಾನಮಂತ್ರಿ ಒಡಿಶಾಗೆ ತೆರಳಿದ್ದಾರೆ
ಪ್ರಕಟಣಾ ದಿನಾಂಕ:
03 JUN 2023 1:12PM by PIB Bengaluru
ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದ ಪರಿಸ್ಥಿತಿಯನ್ನು ಅವಲೋಕಿಸಲು ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ಪ್ರಧಾನಮಂತ್ರಿ ಅವರು ವಹಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾಗೆ ತೆರಳುತ್ತಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಟ್ವೀಟ್ ಮಾಡಿದೆ:
“ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದ ಸಕಾಲಿಕ ಪರಿಸ್ಥಿತಿಯನ್ನು ಅವಲೋಕಿಸಲು ನಡೆದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದ್ದರು. ಸಂತ್ರಸ್ತರಿಗೆ ರಕ್ಷಣೆ, ಪರಿಹಾರ ಮತ್ತು ವೈದ್ಯಕೀಯ ಆರೈಕೆಗೆ ಸಂಬಂಧಿಸಿದ ಅಂಶಗಳನ್ನು ಪರಿಶೀಲನಾ ಸಭೆಯಲ್ಲಿ ಚರ್ಚಿಸಲಾಯಿತು.
"ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾಗೆ ತೆರಳುತ್ತಿದ್ದು, ಅಲ್ಲಿ ರೈಲು ಅಪಘಾತದ ಹಿನ್ನೆಲೆಯ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ."
***
(ಪ್ರಕಟಣೆ ಐ.ಡಿ.: 1929666)
ವಿಸಿಟರ್ ಕೌಂಟರ್ : 140
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam