ಪ್ರಧಾನ ಮಂತ್ರಿಯವರ ಕಛೇರಿ

ಒಡಿಶಾದಲ್ಲಿ ರೈಲು ಅಪಘಾತದಲ್ಲಿ ಸಂಭವಿಸಿದ ಪ್ರಾಣಹಾನಿಗಳಿಗೆ ಪ್ರಧಾನಮಂತ್ರಿಯವರ ಸಂತಾಪ

Posted On: 02 JUN 2023 9:52PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಒಡಿಶಾದಲ್ಲಿ ರೈಲು ಅವಘಡದಿಂದಾಗಿ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

"ಒಡಿಶಾದಲ್ಲಿ ಸಂಭವಿಸಿದ ರೈಲು ಅವಘಡದಿಂದಾಗಿ ನೊಂದಿದ್ದೇನೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ.  ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ರೈಲ್ವೇ ಸಚಿವ @AshwiniVaishnaw ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ.”

***



(Release ID: 1929758) Visitor Counter : 90