ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕುಮಾರ್ ಘಾಟ್ ನಲ್ಲಿ ಉಲ್ಟಾ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಅವಘಡಕ್ಕೆ  ಪ್ರಧಾನಮಂತ್ರಿ ತೀವ್ರ ದುಃಖ


ಸಂತ್ರಸ್ತರಿಗೆ ಪಿ.ಎಂ.ಎನ್.ಆರ್.ಎಫ್. ನಿಂದ ತಾತ್ಕಾಲಿಕ  ಪರಿಹಾರ ಘೋಷಣೆ

Posted On: 28 JUN 2023 9:12PM by PIB Bengaluru

ತ್ರಿಪುರಾದ ಕುಮಾರ್ ಘಾಟ್ ನಲ್ಲಿ ಉಲ್ಟಾ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರ  ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಧನವನ್ನು ಶ್ರೀ ಮೋದಿ ಘೋಷಿಸಿದ್ದಾರೆ.

ಪಿಎಂಒ ಟ್ವೀಟ್ ಗಳ ಎಳೆಯಲ್ಲಿ, ಪ್ರಧಾನಿ ಹೀಗೆ ಹೇಳಿದ್ದಾರೆ;  

"ಕುಮಾರ್ ಘಾಟ್ ನಲ್ಲಿ  ಉಲ್ಟಾ ರಥಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಅವಘಡವು ತೀವ್ರ ದುಃಖ ತಂದಿದೆ. ಈ ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಸಂತ್ರಸ್ತರಿಗೆ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ: ಪ್ರಧಾನ ಮಂತ್ರಿ @narendramodi"

ತ್ರಿಪುರಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು; ಪ್ರಧಾನ ಮಂತ್ರಿ @narendramodi.

***



(Release ID: 1936481) Visitor Counter : 97