ಪ್ರಧಾನ ಮಂತ್ರಿಯವರ ಕಛೇರಿ

ಭಾರತದ ಬಾಹ್ಯಾಕಾಶ ಪಯಣದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯವನ್ನು ಬರೆಯುತ್ತದೆ: ಪ್ರಧಾನಮಂತ್ರಿ

Posted On: 14 JUL 2023 3:22PM by PIB Bengaluru

ಚಂದ್ರಯಾನ-3 ಉಡಾವಣೆಯಲ್ಲಿ ಭಾರತದ ವಿಜ್ಞಾನಿಗಳ ನಿರಂತರ ಸಮರ್ಪಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಟ್ವೀಟ್ ಸಂದೇಶವನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಈ ರೀತಿ ಟ್ವೀಟ್ ಮಾಡಿದ್ದಾರೆ;

“ಭಾರತದ ಬಾಹ್ಯಾಕಾಶ ಪಯಣದಲ್ಲಿ ಚಂದ್ರಯಾನ-3 ಹೊಸ ಅಧ್ಯಾಯವನ್ನು ಬರೆಯುತ್ತದೆ. ಇದು ಪ್ರತಿ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಎತ್ತರಕ್ಕೆ ಏರಿಸುತ್ತದೆ. ಈ ಮಹತ್ವದ ಸಾಧನೆಯು ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅವರ ಚೈತನ್ಯ ಮತ್ತು ಜಾಣ್ಮೆಗಳಿಗೆ ನಾನು ವಂದಿಸುತ್ತೇನೆ! ” 

*****



(Release ID: 1939507) Visitor Counter : 96