ಪ್ರಧಾನ ಮಂತ್ರಿಯವರ ಕಛೇರಿ

ಪಶ್ಚಿಮ ಬಂಗಾಳ ವಿಧಾನಸಭೆ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ ಸೂಚನೆ

Posted On: 25 JUL 2023 2:23PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. 

ಪಶ್ಚಿಮ ಬಂಗಾಳ ವಿಧಾನಸಭಾ ಶಾಸಕ ಶ್ರೀ ಬಿಷ್ಣು ಪಾದ ರೇ ಅವರ ಅಕಾಲಿಕ ನಿಧನದಿಂದ ನೋವಾಗಿದೆ. ಶ್ರಮಜೀವಿಯಾಗಿದ್ದ ಅವರು ಜನರ ಆಶೋತ್ತರಗಳನ್ನು ಈಡೇರಿಸಲು ಸಾಕಷ್ಟು ಶ್ರಮಿಸಿದ್ದರು. @BJP4Bengal ಅನ್ನು ಬಲಪಡಿಸಲು ಸಾಕಷ್ಟು ಶ್ರಮಿಸಿದರು. ಅವರ ಕುಟುಂಬ ಸದಸ್ಯರಿಗೆ ನನ್ನ ಸಾಂತ್ವನ. ಓಂ ಶಾಂತಿ! ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

********



(Release ID: 1942483) Visitor Counter : 90