ಉಪರಾಷ್ಟ್ರಪತಿಗಳ ಕಾರ್ಯಾಲಯ

ಆಗಸ್ಟ್ 4, 2023 ರಂದು ಉಪರಾಷ್ಟ್ರಪತಿಯವರು ನಾಗ್ಪುರಕ್ಕೆ ಭೇಟಿ ನೀಡಲಿದ್ದಾರೆ


ರಾಷ್ಟ್ರಸಂತ್ ತುಕಾಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಉಪರಾಷ್ಟ್ರಪತಿ ಪಾಲ್ಗೊಳ್ಳಲಿದ್ದಾರೆ

ನೇರ ತೆರಿಗೆಗಳ ರಾಷ್ಟ್ರೀಯ ಅಕಾಡೆಮಿಯಲ್ಲಿ ‘ಪ್ರಣೀತಿ'ಉದ್ದೇಶಿಸಿ ಉಪರಾಷ್ಟ್ರಪತಿಯವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ 

Posted On: 02 AUG 2023 3:15PM by PIB Bengaluru

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಆಗಸ್ಟ್ 4, 2023 ರಂದು ನಾಗ್ಪುರಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ರಾಷ್ಟ್ರಸಂತ್ ತುಕಾಡೋಜಿ ಮಹಾರಾಜ್ ನಾಗ್ಪುರ್ ವಿಶ್ವವಿದ್ಯಾಲಯದ (RTMNU) ಶತಮಾನೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ತಮ್ಮ ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಯವರು  ರಶ್ಮಿಬಾಗ್ ನಲ್ಲಿ ಕವಿವರ್ಯ ಸುರೇಶ್ ಭಟ್ ಸಾಂಸ್ಕೃತಿಕ ಸಭಾಂಗಣಕ್ಕೆ ಭೇಟಿ ನೀಡಲಿದ್ದಾರೆ.

ನಂತರ, ಶ್ರೀ ಧನಕರ್ ಅವರು ನೇರ ತೆರಿಗೆಗಳ ರಾಷ್ಟ್ರೀಯ ಅಕಾಡೆಮಿಯಲ್ಲಿ ಭಾರತೀಯ ಕಂದಾಯ ಸೇವೆಯ ತರಬೇತಿನಿರತ ಅಧಿಕಾರಿಗಳಿಗಾಗಿ 'ಪ್ರಣೀತಿ' ಉದ್ಘಾಟನಾ ಭಾಷಣ ಮಾಡಲಿದ್ದಾರೆ.
 

***



(Release ID: 1945106) Visitor Counter : 71