ಪ್ರಧಾನ ಮಂತ್ರಿಯವರ ಕಛೇರಿ

ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ, 2023 ನವ ಭಾರತದ ಆಕಾಂಕ್ಷೆಗಳನ್ನು ಪ್ರತಿಧ್ವನಿಸುತ್ತದೆ-ಪ್ರಧಾನಿ ನರೇಂದ್ರ ಮೋದಿ

Posted On: 08 AUG 2023 1:49PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಭೂಪೇಂದರ್ ಯಾದವ್ ಅವರ ಲೇಖನ ಮೂಲಕ ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ, 2023ರ ಮೇಲೆ ಬೆಳಕು ಚೆಲ್ಲಿದ್ದಾರೆ.

ಈ ಮಸೂದೆಯು, ನವ ಭಾರತದಲ್ಲಿ ಜನರ ಆಕಾಂಕ್ಷೆಗಳಿಗೆ ಹೇಗೆ ಸ್ಪಂದಿಸುತ್ತದೆ, ಅರಣ್ಯಗಳ ಹೊರಗೆ ಹಸಿರು ಪ್ರದೇಶಗಳನ್ನು ಹೆಚ್ಚಿಸಲು ಮತ್ತು ಅರಣ್ಯಗಳನ್ನು ಹೆಚ್ಚು ಉತ್ಪಾದಕವಾಗಿಸಲು ಹೇಗೆ ನೆಲೆ ನೀಡುತ್ತದೆ ಎಂಬ ಬಗ್ಗೆ ಸಚಿವರು ವಿವರಿಸಿದ್ದಾರೆ. 

ಇದಕ್ಕೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿ:

"ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆ, 2023ರ ಬಗ್ಗೆ ಬರೆದಿದ್ದಾರೆ... ಓದಿ!" ಎಂದು ಹೇಳಿದ್ದಾರೆ.

 

*****

 



(Release ID: 1946700) Visitor Counter : 97