ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಿಜೋರಂನ ಸೇತುವೆ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ 


ಸಂತ್ರಸ್ತರಿಗೆ ಪಿಎಂಎನ್ ಆರ್ ಎಫ್ ನಿಂದ ಪರಿಹಾರ ಘೋಷಣೆ 

ಪ್ರಕಟಣಾ ದಿನಾಂಕ: 23 AUG 2023 12:45PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಂನಲ್ಲಿ ನಡೆದ ಸೇತುವೆ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. 

ಪ್ರಧಾನಮಂತ್ರಿ ಅವರು ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು  ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ಕಾರ್ಯಾಲಯ  X ನಲ್ಲಿ ಈ ಪೋಸ್ಟ್ ಮಾಡಿದೆ.

“ಮಿಜೋರಂನಲ್ಲಿ ನಡೆದ ಸೇತುವೆ ದುರಂತ ನೋವು ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವವರಿಗೆ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಮತ್ತು ಸಂತ್ರಸ್ತರಿಗೆ ಎಲ್ಲಾ ರೀತಿಯ ಸಾಧ್ಯವಾದ ನೆರವನ್ನು ನೀಡಲಾಗುವುದು’’  

ಪಿಎಂಎನ್ ಆರ್ ಎಫ್ ನಿಧಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು  ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ ‘’   

 

***


(ಪ್ರಕಟಣೆ ಐ.ಡಿ.: 1951432) ವಿಸಿಟರ್ ಕೌಂಟರ್ : 149