ಪ್ರಧಾನ ಮಂತ್ರಿಯವರ ಕಛೇರಿ
ರಕ್ಷಾ ಬಂಧನದ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ
Posted On:
30 AUG 2023 10:48AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸೌಹಾರ್ದತೆ ಮತ್ತು ಸಾಮರಸ್ಯದ ಭಾವನೆಯನ್ನು ಆಳಗೊಳಿಸಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
" ನನ್ನ ಕುಟುಂಬದ ಎಲ್ಲ ಸದಸ್ಯರಿಗೆ ರಕ್ಷಾ ಬಂಧನದ ಶುಭಾಶಯಗಳು. ಸಹೋದರಿ ಮತ್ತು ಸಹೋದರರ ನಡುವಿನ ಮುರಿಯಲಾಗದ ನಂಬಿಕೆ ಮತ್ತು ಕೊನೆಯಿಲ್ಲದ ಪ್ರೀತಿಗೆ ಸಮರ್ಪಿತವಾದ ರಕ್ಷಾ ಬಂಧನದ ಈ ಪವಿತ್ರ ಹಬ್ಬವು ನಮ್ಮ ಸಂಸ್ಕೃತಿಯ ಪವಿತ್ರ ಪ್ರತಿಬಿಂಬವಾಗಿದೆ. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ವಾತ್ಸಲ್ಯ, ಸಾಮರಸ್ಯ ಮತ್ತು ಸಾಮರಸ್ಯದ ಮನೋಭಾವವನ್ನು ಮತ್ತಷ್ಟು ಆಳಗೊಳಿಸಲಿ." ಎಂದಿದ್ದಾರೆ.
*******
(Release ID: 1953468)
Visitor Counter : 135
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam