ಪ್ರಧಾನ ಮಂತ್ರಿಯವರ ಕಛೇರಿ

ಮೇರಿ ಮಾಟಿ ಮೇರಾ ದೇಶ್ (ನನ್ನ ಮಣ್ಣು ನನ್ನ ದೇಶ) ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನಾಗರಿಕರಿಗೆ ಪ್ರಧಾನಮಂತ್ರಿ ಕರೆ

Posted On: 01 SEP 2023 8:19PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೇರಿ ಮಾಟಿ ಮೇರಾ ದೇಶ್ ಅಭಿಯಾನಕ್ಕೆ ಎಲ್ಲ ಯಶಸ್ಸನ್ನು ಹಾರೈಸಿದ್ದಾರೆ ಮತ್ತು ದೇಶಾದ್ಯಂತದ ಮಣ್ಣಿನಿಂದ ತಯಾರಿಸಿದ ' ವಾಟಿಕಾ ' ' ಏಕ್ ಭಾರತ್ ಶ್ರೇಷ್ಠ ಭಾರತ್ ' ಆದರ್ಶವನ್ನು ಸಾಕಾರಗೊಳಿಸಲಿದೆ ಎಂಬ ಭರವಸೆ ವ್ಯಕ್ತಪಡಿಸಿದರು

ಕೇಂದ್ರ ಸಚಿವ ಶ್ರೀ ಅಮಿತ್ ಶಾ ಅವರ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ,

" ಶುಭ ಹಾರೈಕೆಗಳು!" 'ಮೇರಿ ಮಾಟಿ-ಮೇರಾ ದೇಶ್ ' ಅಭಿಯಾನವು ನಮ್ಮ ಏಕತೆ ಮತ್ತು ಸಮಗ್ರತೆಯ ಸ್ಫೂರ್ತಿಯನ್ನು ಮತ್ತಷ್ಟು ಬಲಪಡಿಸಲಿದೆ. ಇದರ ಅಡಿಯಲ್ಲಿ, ದೇಶಾದ್ಯಂತ ಸಂಗ್ರಹಿಸಿದ ಮಣ್ಣಿನಿಂದ ಅಮೃತ ವಾಟಿಕಾವನ್ನು ರಚಿಸಲಾಗುವುದು, ಇದು ' ಏಕ್ ಭಾರತ್ ಶ್ರೇಷ್ಠ ಭಾರತ್ ' ದೃಷ್ಟಿಕೋನವನ್ನು ಸಾಕಾರಗೊಳಿಸುತ್ತದೆ ಎಂದು ನನಗೆ ವಿಶ್ವಾಸವಿದೆ. ಈ 'ಅಮೃತ ಕಳಶ ಯಾತ್ರೆ'ಯಲ್ಲಿ ನಮ್ಮ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳೋಣ,"ಎಂದಿದ್ದಾರೆ.

 

***



(Release ID: 1954549) Visitor Counter : 125