ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪರಿಸರದ ಬಿಕ್ಕಟ್ಟುಗಳು ಮತ್ತು ಸವಾಲುಗಳನ್ನು ಪರಿಹರಿಸುವ ಕ್ರಮವಿಧಾನಗಳನ್ನು ತುರ್ತಾಗಿ ವೇಗಗೊಳಿಸಲು ಜಿ20 ದೇಶಗಳ ಹೊಂದಿರುವ ಬದ್ಧತೆಯನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 16 SEP 2023 3:05PM by PIB Bengaluru

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರ ಲೇಖನದ ಆಶಯದ ಮೂಲಕ ಹವಾಮಾನ ಬದಲಾವಣೆ ಸೇರಿದಂತೆ ಪರಿಸರ ಬಿಕ್ಕಟ್ಟುಗಳು ಮತ್ತು ಸವಾಲುಗಳನ್ನು ಎದುರಿಸಲು ತುರ್ತು ಕ್ರಮಗಳನ್ನು ತ್ವರಿತಗೊಳಿಸುವ ಜಿ20 ರಾಷ್ಟ್ರಗಳ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಪ್ಪಿಕೊಂಡಿದ್ದಾರೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ ಭೂಪೇಂದರ್ ಯಾದವ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ  ಹಂಚಿಕೊಂಡಿರುವ ಸಂದೇಶಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಅವರು, ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಹೇಳಿದ್ದಾರೆ;

 “ ಜಿ20 ದೇಶಗಳು ಹವಾಮಾನ ಬದಲಾವಣೆ ಸೇರಿದಂತೆ ಪರಿಸರ ಬಿಕ್ಕಟ್ಟುಗಳು ಮತ್ತು ಸವಾಲುಗಳನ್ನು ಪರಿಹರಿಸಲು ಕ್ರಮವಿಧಾನಗಳನ್ನು 'ತುರ್ತಾಗಿ ವೇಗಗೊಳಿಸಲು' ಬದ್ಧವಾಗಿವೆ ಎಂದು ಕೇಂದ್ರ ಪರಿಸರ ಸಚಿವ ಶ್ರೀ ಭೂಪೇಂದರ್ ಯಾದವ್ ಚೆನ್ನಾಗಿ ವಿವರಿಸಿದ್ದಾರೆ.”


(ಪ್ರಕಟಣೆ ಐ.ಡಿ.: 1958031) ವಿಸಿಟರ್ ಕೌಂಟರ್ : 137