ಪ್ರಧಾನ ಮಂತ್ರಿಯವರ ಕಛೇರಿ

ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಪ್ರಧಾನಿ ಸ್ಮರಣೆ

Posted On: 02 OCT 2023 8:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಸಂದೇಶ ನೀಡಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರ ಸರಳತೆ, ದೇಶಕ್ಕಾಗಿ ಸಮರ್ಪಣೆ ಮತ್ತು 'ಜೈ ಜವಾನ್, ಜೈ ಕಿಸಾನ್' ಎಂಬ ಘೋಷಣೆ ಇಂದಿಗೂ ಪ್ರತಿಧ್ವನಿಸುತ್ತದೆ, ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತದ ಪ್ರಗತಿಗೆ ಅವರ ಅಚಲ ಬದ್ಧತೆ ಮತ್ತು ಸವಾಲಿನ ಸಮಯದಲ್ಲಿ ಅವರ ನಾಯಕತ್ವವು ಅನುಕರಣೀಯವಾಗಿದೆ. ಬಲಿಷ್ಠ ಭಾರತಕ್ಕಾಗಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಯಾವಾಗಲೂ ಕೆಲಸ ಮಾಡೋಣ ಎಂದು ಪ್ರಧಾನಮಂತ್ರಿ ಸ್ಮರಿಸಿದ್ದಾರೆ.



(Release ID: 1963271) Visitor Counter : 69