ಸಂಪುಟ
azadi ka amrit mahotsav

ತೆಲಂಗಾಣ ರಾಜ್ಯದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯ್ದೆ, 2009 ರ ತಿದ್ದುಪಡಿಗೆ ಸಂಪುಟ ಅನುಮೋದನೆ

प्रविष्टि तिथि: 04 OCT 2023 4:04PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ಜನಾಂಗ ವಿಶ್ವವಿದ್ಯಾಲಯ ಸ್ಥಾಪಿಸಲು ಕೇಂದ್ರೀಯ ವಿಶ್ವವಿದ್ಯಾಲಯಗಳ ಕಾಯ್ದೆ, 2009 ನ್ನು ತಿದ್ದುಪಡಿ ಮಾಡಲು ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ, 2023ನ್ನು ಸಂಸತ್ತಿನಲ್ಲಿ ಮಂಡಿಸಲು ಅನುಮೋದನೆಯನ್ನು ನೀಡಿತು. 

ತೆಲಂಗಾಣ ರಾಜ್ಯದ ಮುಲುಗು ಜಿಲ್ಲೆಯಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿದ್ದು, ಆಂಧ್ರ ಪ್ರದೇಶ ಮರು-ಸಂಘಟನೆ ಕಾಯಿದೆ, 2014 (ಸಂ. 6 ರ 2014) ಗೆ ಹದಿಮೂರನೇ ಶೆಡ್ಯೂಲ್‌ನಲ್ಲಿ ಒದಗಿಸಲಾಗಿದೆ.

889.07 ಕೋಟಿ ರೂಪಾಯಿ ನಿಧಿಯನ್ನು ಒದಗಿಸಲಾಗುತ್ತದೆ. ತೆಲಂಗಾಣದಲ್ಲಿ ಹೊಸ ವಿಶ್ವವಿದ್ಯಾಲಯವು ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಪ್ರವೇಶವನ್ನು ಹೆಚ್ಚಿಸುವುದು ಮತ್ತು ಗುಣಮಟ್ಟವನ್ನು ಸುಧಾರಿಸುತ್ತದೆ.ಅಲ್ಲದೆ ಬುಡಕಟ್ಟು ಜನಾಂಗದವರ ಅನುಕೂಲಕ್ಕಾಗಿ ಬುಡಕಟ್ಟು ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಯಲ್ಲಿ ಸೂಚನಾ ಮತ್ತು ಸಂಶೋಧನಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಉನ್ನತ ಶಿಕ್ಷಣ ಮತ್ತು ಉನ್ನತ ಜ್ಞಾನದ ಮಾರ್ಗಗಳನ್ನು ಉತ್ತೇಜಿಸುತ್ತದೆ. ಹೊಸ ವಿಶ್ವವಿದ್ಯಾಲಯವು ಹೆಚ್ಚುವರಿ ಸಾಮರ್ಥ್ಯವನ್ನು ಸೃಷ್ಟಿಸುವುದು ಮಾತ್ರವಲ್ಲದೆ ಪ್ರಾದೇಶಿಕ ಅಸಮತೋಲನವನ್ನು ತೆಗೆದುಹಾಕಲು ಶ್ರಮಿಸುತ್ತದೆ.

*****


(रिलीज़ आईडी: 1964151) आगंतुक पटल : 169
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam