ಪ್ರಧಾನ ಮಂತ್ರಿಯವರ ಕಛೇರಿ

​​​​​​​ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್ ನೊಂದಿಗೆ ದೃಢವಾಗಿ ನಿಂತಿದ್ದಾರೆ: ಪ್ರಧಾನಮಂತ್ರಿ

Posted On: 10 OCT 2023 4:07PM by PIB Bengaluru

ತಮ್ಮ ದೇಶದಲ್ಲಿನ ಪ್ರಸಕ್ತ ಸ್ಥಿತಿಗತಿ ಕುರಿತು ತಾಜಾ ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ನ ಸಹವರ್ತಿ ಬೆಂಜಮಿನ್ ನೇತಾನ್ಯಾಹು ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಎಲ್ಲ ಸ್ವರೂಪದ ಭಯೋತ್ಪಾದನಾ ಕೃತ್ಯಗಳನ್ನು ಖಂಡಿಸಿರುವ ಪ್ರಧಾನಿ ಅವರು, ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಗೆ ಒಗ್ಗಟ್ಟು ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರು X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಪ್ರಧಾನಿ ಬೆಂಜಮಿನ್ ನೇತಾನ್ಯಾಹು ಅವರ ದೂರವಾಣಿ ಕರೆ ಮಾಡಿದ್ದಕ್ಕಾಗಿ ಮತ್ತು ಸದ್ಯ ಅಲ್ಲಿನ ಪರಿಸ್ಥಿತಿಯ ಬಗ್ಗೆ ತಾಜಾ ಮಾಹಿತಿಯನ್ನು ಒದಗಿಸಿದ್ದಕ್ಕಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ದೃಢವಾಗಿ ನಿಂತಿದ್ದಾರೆ. ಭಾರತವು  ಎಲ್ಲಾ ಸ್ವರೂಪದ ಭಯೋತ್ಪಾದನೆಯನ್ನು ಮತ್ತು ಅದನ್ನು ಅಭಿವ್ಯಕ್ತಿಗೊಳಿಸುವುದನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ."

 

***



(Release ID: 1966292) Visitor Counter : 88