ಪ್ರಧಾನ ಮಂತ್ರಿಯವರ ಕಛೇರಿ

ಕೇರಳದ ಮಾಜಿ ಸಿಎಂ ವಿ.ಎಸ್. ಅಚ್ಯುತಾನಂದನ್ ಅವರ 100ನೇ ಜನ್ಮದಿನದ ಹಿನ್ನೆಲೆಯಲ್ಲಿ ಶುಭ ಕೋರಿದ ಪ್ರಧಾನ ಮಂತ್ರಿಗಳು

Posted On: 20 OCT 2023 10:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ. ಎಸ್. ಅಚ್ಯುತಾನಂದನ್ ಅವರಿಗೆ 100ನೇ ಜನ್ಮದಿನದ ಶುಭಾಶಯ ಕೋರಿದರು. ಹಲವು ದಶಕಗಳ ಕಾಲ ಕೇರಳದ ಜನತೆಗೆ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿ ಶ್ಲಾಘಿಸಿದ ಪ್ರಧಾನ ಮಂತ್ರಿಗಳು ಅಚ್ಯುತಾನಂದನ್‌ ಅವರು ದೀರ್ಘಕಾಲ ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದರು.

ಈ ಸಂಬಂಧ "ಎಕ್ಸ್‌ʼ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

"100ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೇರಳದ ಮಾಜಿ ಸಿಎಂ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರಿಗೆ ವಿಶೇಷ ಶುಭಾಶಯಗಳು. ಅವರು ಹಲವು ದಶಕಗಳಿಂದ ಕೇರಳದ ಜನರಿಗಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ನಾನು ಅವರೊಂದಿಗೆ ನನ್ನ ನಡೆಸಿದ ಸಂವಾದವನ್ನು ನೆನಪಿಸಿಕೊಳ್ಳುತ್ತೇನೆ. ಅದರಲ್ಲೂ ವಿಶೇಷವಾಗಿ ನಾವಿಬ್ಬರೂ ನಮ್ಮ ನಮ್ಮ ರಾಜ್ಯಗಳ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ ಸಂದರ್ಭವನ್ನೂ ಸ್ಮರಿಸಿಕೊಳ್ಳುತ್ತೇನೆ. ಅವರು ದೀರ್ಘಕಾಲ ಆರೋಗ್ಯಕರ ಜೀವನವನ್ನು ನಡೆಸುವಂತಾಗಲಿ,ʼʼ ಎಂದು ಆಶಿಸಿದ್ದಾರೆ.

***



(Release ID: 1971237) Visitor Counter : 75