ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನ ಮಂತ್ರಿ ಭೇಟಿ ಮಾಡಿದ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪದಾಧಿಕಾರಿಗಳು
Posted On:
25 OCT 2023 8:18PM by PIB Bengaluru
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪದಾಧಿಕಾರಿಗಳು ದೆಹಲಿಯಲ್ಲಿಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಗೆ(ಪ್ರಾಣ ಪ್ರತಿಷ್ಠೆ) ಆಗಮಿಸುವಂತೆ ಪದಾಧಿಕಾರಿಗಳು ಶ್ರೀ ಮೋದಿ ಅವರನ್ನು ಆಹ್ವಾನಿಸಿದರು.
"ನಾನು ತುಂಬಾ ಆಶೀರ್ವಾದ ಪಡೆದಿದ್ದೇನೆ. ನನ್ನ ಜೀವಿತಾವಧಿಯಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಅದೃಷ್ಟ" ಎಂದು ಪ್ರಧಾನಿ ಹೇಳಿದರು.
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ:
"ಜೈ ಸಿಯಾ ರಾಮ್!
ಅಪಾರ ಭಾವನೆಗಳಿಂದ ತುಂಬಿರುವ ದಿನ ಇದಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪದಾಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಶ್ರೀರಾಮ ಮಂದಿರದ ಪ್ರತಿಷ್ಠಾಪ ಯ ಸಂದರ್ಭದಲ್ಲಿ ಅಯೋಧ್ಯೆಗೆ ಆಗಮಿಸುವಂತೆ ಅವರು ನನ್ನನ್ನು ಆಹ್ವಾನಿಸಿದ್ದಾರೆ.
ನಾನು ತುಂಬಾ ಆಶೀರ್ವಾದ ಪಡೆದಿದ್ದೇನೆ. ನನ್ನ ಜೀವಿತಾವಧಿಯಲ್ಲಿ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಅದೃಷ್ಟ” ಎಂದು ಪ್ರಧಾನಿ ತಿಳಿಸಿದ್ದಾರೆ.
**************
(Release ID: 1971323)
Visitor Counter : 108
Read this release in:
Malayalam
,
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu